ಸಿನಿಮಾ

BigBosskannada; ರಂಜಿತ್, ಜಗದೀಶ್ ಮನೆಯಿಂದ ಔಟ್: ಅಧಿಕೃತವಾಗಿ ಬಿಗ್ ಬಾಸ್ ಹೇಳಿಕೆ!

ಜಗದೀಶ್, ರಂಜಿತ್ ಈ ಕೂಡಲೇ ಮನೆಯಿಂದ ಹೊರಗೆ ಬನ್ನಿ’ ಎಂದು ಬಿಗ್ ಬಾಸ್ ಆದೇಶ ಹೊರಡಿಸಿದೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಫ್ರೀ ಟ್ಯೂಷನ್ ಭಾಗ್ಯ!

ಜಗದೀಶ್ ಅವರು ಬಿಗ್ ಬಾಸ್ ಮನೆಯೊಳಗೆ ಕೆಟ್ಟ ಮಾತುಗಳನ್ನು ಆಡುವ ಮೂಲಕ ಕಿಚ್ಚು ಹಚ್ಚಿದ್ದಾರೆ.

ದೊಡ್ಮನೆಯಲ್ಲಿ ಇರುವ ಹೆಣ್ಣು ಮಕ್ಕಳ ಬಗ್ಗೆ ಅವರು ಕೀಳಾಗಿ ಮಾತನಾಡಿದ್ದಾರೆ. ಇದನ್ನು ಇನ್ನುಳಿದ ಎಲ್ಲ ಸದಸ್ಯರು ಖಂಡಿಸಿದ್ದಾರೆ. ಈ ಬಗ್ಗೆ ವಾದ ನಡೆಯುವಾಗ ರಂಜಿತ್ ಅವರು ಜಗದೀಶ್ ಮೇಲೆ ಕೈ ಮಾಡಿದ್ದಾರೆ. ಇದರಿಂದ ಬಿಗ್ ಬಾಸ್ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ.

ನಿನ್ನೆಯ ಸಂಚಿಕೆಯಲ್ಲಿ ಜಗದೀಶ್ ಮತ್ತು ಗೋಲ್ಡ್ ಸುರೇಶ್ ಮಾತನಾಡುತ್ತ ಕುಳಿತಿದ್ದರು. ಆಗ ಹಂಸಾ ಬಗ್ಗೆ ಜಗದೀಶ್ ಅವರು ಒಂದಷ್ಟು ಆರೋಪಗಳನ್ನು ಮಾಡಿದರು. ಮಾತಿನ ಭರದಲ್ಲಿ ಹಂಸಾ ಬಗ್ಗೆ ಜಗದೀಶ್ ಅಸಭ್ಯ ಪದ ಬಳಕೆ ಮಾಡಿದ್ದಾರೆ. ಇದನ್ನು ಗೋಲ್ಡ್ ಸುರೇಶ್ ಅವರು ಕೂಡಲೇ ಖಂಡಿಸಿದ್ದಾರೆ. ಅಲ್ಲಿಂದ ದೊಡ್ಡ ಜಗಳ ಶುರುವಾಗಿದೆ.

ಜಗದೀಶ್​ ತುಂಬ ಕೆಟ್ಟ ಮಾತುಗಳನ್ನು ಆಡಿದ್ದರಿಂದ ಇಡೀ ಮನೆಯೇ ಅವರ ವಿರುದ್ಧ ತಿರುಗಿ ಬಿದ್ದಿದೆ. ಚೈತ್ರಾ ಕುಂದಾಪುರ, ಮಾನಸಾ, ಭವ್ಯಾ ಗೌಡ, ಗೌತಮಿ ಜಾದವ್, ಮೋಕ್ಷಿತಾ ಪೈ, ತ್ರಿವಿಕ್ರಮ್, ರಂಜಿತ್, ಉಗ್ರಂ ಮಂಜು ಮುಂತಾದವರು ಜಗದೀಶ್​ಗೆ ಪಾಠ ಕಲಿಸಲು ಮುಂದಾಗಿದ್ದಾರೆ. ಈ ವೇಳೆ ಚೈತ್ರಾ ಕುಂದಾಪುರ ಅವರ ವೈಯಕ್ತಿಕ ವಿಚಾರಗಳನ್ನು ಕೂಡ
ಜಗದೀಶ್ ಎಳೆದು ತಂದಿದ್ದಾರೆ. ಜಗಳ ನಿಲ್ಲಿಸುವಂತೆ ಸ್ವತಃ ಬಿಗ್ ಬಾಸ್ ಆದೇಶ ನೀಡಿದರೂ ಕೂಡ ಅದಕ್ಕೆ ಕೆಲವರು ಬೆಲೆ ನೀಡಲಿಲ್ಲ.

ಹೆಣ್ಮಕ್ಕಳ ಬಗ್ಗೆ ಜಗದೀಶ್ ಆಡಿದ ಮಾತುಗಳನ್ನು ಖಂಡಿತಾ ಸಹಿಸಲು ಸಾಧ್ಯವಿಲ್ಲ ಎಂದು ಬಿಗ್ ಬಾಸ್ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೇ, ಜಗದೀಶ್ ಮೇಲೆ ಕೈ ಮಾಡಿದ್ದಕ್ಕಾಗಿ ರಂಜಿತ್ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ‘ಜಗದೀಶ್ ಹಾಗೂ ರಂಜಿತ್ ಈ ಕೂಡಲೇ ಮನೆಯಿಂದ ಹೊರಗೆ ಬನ್ನಿ’ ಎಂದು ಬಿಗ್ ಬಾಸ್​ ಹೇಳಿದ್ದಾರೆ. ಮುಖ್ಯದ್ವಾರ ಓಪನ್ ಆಗಿದೆ. ಆದರೆ ಅವರಿಬ್ಬರು ಮನೆಯಿಂದ ಹೊರಬಂದಿದ್ದು ಇನ್ನೂ ಕಾಣಿಸಿಲ್ಲ. ಮುಂದಿನ ಸಂಚಿಕೆಯಲ್ಲಿ ಆ ಬಗ್ಗೆ ಸ್ಪಷ್ಟತೆ ಸಿಗಲಿದೆ.

ವರದಿ: ಪುಣ್ಯ ಗೌಡ ಫಿಲಂ ಬ್ಯೂರೋ.tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button