ಸರ್ಕಾರಿ ನೌಕರಿ ಕೊಡಿಸೋದಾಗಿ ವಂಚಿಸುತ್ತಿದ್ದ ವಿಧಾನಸೌಧ ಸಿಬ್ಬಂದಿ ಅರೆಸ್ಟ್..!
ಬೆಂಗಳೂರು, ಸೆ. 29- ಸಚಿವಾಲಯದ ಒಳಾಡಳಿತ ಇಲಾಖೆಯಲ್ಲಿ ಉದ್ಯೋಗ ಕೊಡಿಸುವು ದಾಗಿ ನಂಬಿಸಿ ಸುಮಾರು 50 ಮಂದಿಯಿಂದ 1.61 ಕೋಟಿ ರೂಪಾಯಿ ಪಡೆದು ನಕಲಿ ಆದೇಶ ಪತ್ರಗಳನ್ನು ನೀಡಿ ವಂಚಿಸಿದ್ದ ಇಬ್ಬರು ಸರ್ಕಾರಿ ನೌಕರರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಸಿದ್ದಾರೆ.
ಸರ್ಕಾರದ ಒಳಾಡಳಿತ ಇಲಾಖೆಯಲ್ಲಿ ಕಡತ ನಿರ್ವಾಹಕರಾಗಿದ್ದ ಶ್ರೀಲೇಖ ಮತ್ತು ವಿಧಾನಸೌಧದಲ್ಲಿ ಗ್ರೂಪ್ ಡಿ ನೌಕರ (ದಲಾಯತ್) ಮೋಹನ್ ಅಲಿಯಾಸ್ ಸಂಪತ್ ಕುಮಾರ್ನನ್ನು ಬಂತ ಆರೋಪಿಗಳು. 2019ನೆ ಸಾಲಿನ ಮಾರ್ಚ್ನಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷರೆಂದು ಪರಿಚಯಿಸಿಕೊಂಡ ರಾಧಾ ಉಮೇಶ್ ಎಂಬುವವರು ತಮಗೆ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಪರಿಚಯವಿದೆ.
ಕಾರ್ಮಿಕ ರಿಗೆ ಸಂಬಂಸಿದ ಕೆಲಸಗಳನ್ನು ಅವರಿಂದ ಮಾಡಿಸಿಕೊಡುತ್ತೇನೆ ಎಂದು ಹೇಳುತ್ತಿದ್ದುದ್ದನ್ನು ಗಮನಿಸಿದ ಮಂಜುನಾಥ್ ಎಂಬುವವರು ಅವರ ತಮ್ಮನಿಗೆ ಯಾವುದೇ ಉದ್ಯೋಗವಿಲ್ಲದ ಕಾರಣ ಆತನಿಗೆ ಸಚಿವಾಲಯದಲ್ಲಿ ದಿನಗೂಲಿ ನೌಕರರ ಏಜೆನ್ಸಿ ಕೊಡಿಸಿಕೊಡಿ ಎಂದು ಕೇಳಿದ್ದರು.
ಏಜೆನ್ಸಿ ಕೊಡಿಸಲು ತುಂಬಾ ಹಣ ಖರ್ಚಾಗುತ್ತದೆ ಎಂದು ಹೇಳಿ ಮಂಜುನಾಥ್ ಅವರಿಂದ 4 ಕಂತುಗಳಲ್ಲಿ 15 ಲಕ್ಷ ರೂ.ಗಳನ್ನು ಪಡೆದುಕೊಂಡಿರುತ್ತಾರೆ. ನಂತರ ಏಜೆನ್ಸಿಯ ಬಗ್ಗೆ ಮಂಜುನಾಥ್ ಅವರು ಕೇಳಿದಾಗ , ತಮಗೆ ಸರ್ಕಾರಿ ಒಡಾಳಿತ ಇಲಾಖೆಯಲ್ಲಿ ಕಡತ ನಿರ್ವಾಹಕರಾಗಿರುವ ಶ್ರೀಲೇಖಾ ಎಂಬುವವರ ಪರಿಚಯವಿದೆ, ಅವರು ನಿಮ್ಮ ಏಜೆನ್ಸಿ ಕೆಲಸ ಮಾಡಿಕೊಡುತ್ತಾರೆ ಎಂದು ಪರಿಚಯ ಮಾಡಿಕೊಟ್ಟಿದ್ದಾರೆ.
ಶ್ರೀಲೇಖಾ ಅವರು ಏಜೆನ್ಸಿ ಕೊಡಿಸಲು ತಡವಾಗುತ್ತದೆ, ಸಚಿವಾಲಯದ ಒಳಾಡಳಿತ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಕಿರಿಯ ಸಹಾಯಕರು, ಹಿರಿಯ ಸಹಾಯಕರು ಮತ್ತು ಅೀಕ್ಷಕರ ಹುದ್ದೆಗಳ ನೇಮಕಾತಿಗಳನ್ನು ನಿಮಗೆ ಪರಿಚಯವಿರುವವರಿಗೆ ಮಾಡಿಸಿಕೊಡುತ್ತೇನೆ ಎಂದು ನಂಬಿಸಿದ್ದಾರೆ.
ಇವರ ಮಾತನ್ನು ನಂಬಿದ ಮಂಜುನಾಥ್ ಅವರು ಅವರ ಸಂಬಂಕರು ಮತ್ತು ಸ್ನೇಹಿತರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ಉದ್ಯೋಗ ಕೊಡಿಸಬಹುದು ಎಂದು ನಂಬಿಕೊಂಡು ಸುಮಾರು 55 ಮಂದಿಯನ್ನು ಸಂಪರ್ಕಿಸಿ ಅವರಿಗೆ ಶ್ರೀಲೇಖಾ ಅವರ ವಿಚಾರ ತಿಳಿಸಿದ್ದಾರೆ.
ಸರ್ಕಾರಿ ಉದ್ಯೋಗ ಸಿಗುತ್ತದೆ ಎಂದು ನಂಬಿ ಕಳೆದ ಆಗಸ್ಟ್ 15 ರಿಂದ ಸೆಪ್ಟೆಂಬರ್ 20ರವರೆಗೆ 76.54 ಲಕ್ಷ ರೂ.ಗಳನ್ನು ಮಂಜುನಾಥ್ ಅವರ ಬ್ಯಾಂಕ್ ಖಾತೆಯಿಂದ ಗೂಗಲ್ ಪೇ,ಫೋನ್ ಪೇ, ಎನ್ಇಎಫ್ಟಿ ಮೂಲಕ ಶ್ರೀಲೇಖಾ ಅವರ ಎಸ್ಬಿಐ ಬ್ಯಾಂಕ್ ಖಾತೆ ಹಾಗೂ ಅಲಹಾಬಾದ್ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ. ಹಾಗೆಯೇ 56.40 ಲಕ್ಷ ರೂ.ಗಳನ್ನು ಶ್ರೀಲೇಖಾ ಅವರಿಗೆ ನಗದು ರೂಪದಲ್ಲಿ ಕೊಟ್ಟಿರುತ್ತಾರೆ.
ಅಭ್ಯರ್ಥಿಗಳಿಗೆ ಕೊಡುವಂತೆ ನೇಮಕಾತಿ ಆದೇಶಗಳನ್ನು ವಿಕಾಸಸೌಧದಲ್ಲಿ ಕೆಲಸ ಮಾಡುವ ಮೋಹನ್ ಅಲಿಯಾಸ್ ಸಂಪತ್ಕುಮಾರ್ ಎಂಬುವವರು ಮಂಜುನಾಥ್ ಅವರಿಗೆ ತಂದುಕೊಡುತ್ತಿದ್ದರು ಹಾಗೂ ಅಭ್ಯರ್ಥಿಗಳನ್ನು ವಿಕಾಸಸೌಧದ ಯಾವುದೋ ಕಚೇರಿಗೆ ಕರೆದುಕೊಂಡು ಹೋಗಿ ನಂತರ ಅವರ ಮೂಲ ದಾಖಲಾತಿಯನ್ನು ಪಡೆದುಕೊಂಡು ಪರಿಶೀಲನೆ ಮಾಡಿದ ಹಾಗೆ ಮಾಡಿ, ನಂತರ ತರಬೇತಿಗೆ ಹಾಜರಾಗುವಂತೆ ಒಂದು ಪತ್ರವನ್ನು ಕೊಟ್ಟು ಕಳುಹಿಸಿದ್ದಾರೆ.
ಈ ಕೆಲಸಕ್ಕಾಗಿ ಸಂಪತ್ಕುಮಾರ್ಗೆ 22.75 ಲಕ್ಷ ರೂ. ನಗದು ರೂಪದಲ್ಲಿ ಮತ್ತು ಇವರ ಮೊಬೈಲ್ಗೆ ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ 5.90 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿರುತ್ತಾರೆ. ಸೆಪ್ಟೆಂಬರ್ 24 ರಂದು ರಾಕೇಶ್ ಎಂಬ ಅಭ್ಯರ್ಥಿ ಸಂಪತ್ಕುಮಾರ್ ನೀಡಿದ್ದ ಆದೇಶ ಪತ್ರವನ್ನು ತೆಗೆದುಕೊಂಡು ವಿಧಾನಸೌಧದ ಆರ್ಥಿಕ ಇಲಾಖೆಗೆ ಹೋಗಿ ವಿಚಾರಿಸಿದ್ದಾರೆ. ಅಲ್ಲಿನ ಸಿಬ್ಬಂದಿ ಆದೇಶ ಪತ್ರವನ್ನು ಪರಿಶೀಲಿಸಿ ಈ ರೀತಿ ಯಾವುದೇ ನೇಮಕಾತಿಗಳನ್ನು ಇಲಾಖೆಯಲ್ಲಿ ಮಾಡುತ್ತಿಲ್ಲವೆಂದು ತಿಳಿಸಿ ಇದೊಂದು ನಕಲಿ ಆದೇಶ ಪತ್ರವೆಂದು ಹೇಳಿದ್ದಾರೆ.
ತಕ್ಷಣ ರಾಕೇಶ್ ಅವರು ಮಂಜುನಾಥ್ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಶ್ರೀಲೇಖಾ ಮತ್ತು ಸಂಪತ್ಕುಮಾರ್ ನೀಡಿದ್ದ ನೇಮಕಾತಿ ಆದೇಶ ಪತ್ರಗಳನ್ನು ತಮಗೆ ಪರಿಚಯವಿದ್ದವರಿಗೆ ತೋರಿಸಿ ವಿಚಾರಿಸಿದಾಗ ಇವು ನಕಲಿ ನೇಮಕಾತಿ ಪತ್ರವೆಂದು ತಿಳಿದುಬಂದಾಗ ಮೋಸ ಹೋಗಿರುವುದನ್ನು ಅರಿತು ತಕ್ಷಣ ಮಂಜುನಾಥ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಸರ್ಕಾರಿ ಉದ್ಯೋಗದ ಅಮಿಷವೊಡ್ಡಿ ನನ್ನ ಸಂಬಂಕರು ಹಾಗೂ ಸ್ನೇಹಿತರನ್ನು ನಂಬಿಸಿ ನಮ್ಮಿಂದ ಒಟ್ಟು 1.61 ಕೋಟಿ ರೂ.ಗಳನ್ನು ಪಡೆದುಕೊಂಡು ನಕಲಿ ನೇಮಕಾತಿ ಆದೇಶ ಪತ್ರಗಳನ್ನು ಕೊಟ್ಟು ಮೋಸ ಮಾಡಿರುವ ಶ್ರೀಲೇಖಾ ಮತ್ತು ಸಂಪತ್ಕುಮಾರ್ ಹಾಗೂ ಏಜೆನ್ಸಿ ಕೊಡಿಸುವುದಾಗಿ 15 ಲಕ್ಷ ರೂ.ಗಳನ್ನು ಪಡೆದುಕೊಂಡು ವಂಚಿಸಿರುವ ರಾಧಾ ಉಮೇಶ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಸಿ ತೀವ್ರ ವಿಚಾರಣೆಗೆ ಒಳಪಡಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.