ರಾಜಕೀಯಸುದ್ದಿ

ರಾಹುಲ್ ಗಾಂಧಿ ಭಲೇ ನಾಟಕಕಾರ: ಉತ್ತರಪ್ರದೇಶ ಸಚಿವ ಸಿದ್ಧಾರ್ಥ್​ ನಾಥ್ ಸಿಂಗ್ ಕಿಡಿ..!

ಲಕ್ನೋ (ಅಕ್ಟೋಬರ್​ 07); ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ಬುಧವಾರ ಅನವಶ್ಯಕವಾಗಿ ಲಕ್ನೋ ವಿಮಾನ (Lucknow) ನಿಲ್ದಾಣದಲ್ಲಿ ಭಲೇ ನಾಟಕವನ್ನೇ ನಡೆಸಿದ್ದಾರೆ ಎಂದು ಉತ್ತರಪ್ರದೇಶದ ಸಚಿವ ಸಿದ್ದಾರ್ಥ್​ ನಾಥ್​ ಸಿಂಗ್ (Sidharth Nath Singh) ಕಿಡಿಕಾರಿದ್ದಾರೆ. ಲಖೀಂಪುರ್​ ಖೇರಿ (Lakhimpur Kheri) ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡುವ ಸಲುವಾಗಿ ಸೋಮವಾರವೇ ಪ್ರಿಯಾಂಕಾ ಗಾಂಧಿ ಲಖೀಂಪುರ್​ ಖೇರಿಗೆ  ತಲುಪಿದ್ದರು.

ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬಂಧಿಸಿ ಗೆಸ್ಟ್​ಹೌಸ್​ನಲ್ಲಿ ಗೃಹ ಬಂಧನದಲ್ಲಿ ಇಡಲಾಗಿತ್ತು. ಹೀಗಾಗಿ ನಿನ್ನೆ ರಾಹುಲ್​ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಮತ್ತು ಛತ್ತೀಸ್‌ಗಢದ ಸಿಎಂ ಭೂಪೇಶ್ ಬಘೇಲ್ ಉತ್ತರ ಪ್ರದೇಶಕ್ಕೆ ಆಗಮಿಸಿದ್ದರು. ಆದರೆ, ಅವರಿಗೆ ಲಖೀಂಪುರ್​ ಕೇರಿ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಹೀಗಾಗಿ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲೇ ಧರಣಿ ಆರಂಭಿಸಿದ್ದರು. ಈ ವಿಚಾರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು.

Related Articles

Leave a Reply

Your email address will not be published. Required fields are marked *

Back to top button