ರಾಜ್ಯಸುದ್ದಿ

ಶಿವರಾಮ ಕಾರಂತ ಬಡಾವಣೆ ನಿವೇಶನ ತೆರವು ವೇಳೆ ಹೈಡ್ರಾಮಾ: ಶಾಸಕರು ವಶಕ್ಕೆ..!

ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ(shivaram karanth layout) ನಿವೇಶನ ತೆರವು ವಿಚಾರವಾಗಿ ಹೈಡ್ರಾಮಾವೇ ನಡೆದಿದೆ. ಬೆಳ್ಳಂಬೆಳಗ್ಗೆ ಜೆಸಿಬಿ(JCB)ಯೊಂದಿಗೆ ಬಿಡಿಎ(BDA) ಅಧಿಕಾರಿಗಳು ಮನೆಗಳ ತೆರವಿಗೆ ಮುಂದಾಗುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಮನೆಗಳ ತೆರವು ಹಿನ್ನೆಲೆಯಲ್ಲಿ ಶಾಸಕ ಆರ್.ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಬಿಡಿಎ ಅಧಿಕಾರಿಗಳು ಹಾಗೂ ಶಾಸಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ತೆರವು ಕಾರ್ಯಾಚರಣೆಯನ್ನು ನಿಲ್ಲಿಸಿ ಮತ್ತಷ್ಟು ಸಮಾಯಾವಕಾಶ ನೀಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ. ಆದರೆ ಬಿಡಿಎಂ ಅಧಿಕಾರಿಗಳು ಇದಕ್ಕೆ ಒಪ್ಪದ ಕಾರಣ ಸ್ಥಳದಲ್ಲಿ ಜಟಾಪಟಿ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button