ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಗೊಂದಲ ಉಂಟಾಗಿತ್ತು, ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ, ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.
ಇದಾದ ಕಾಂಗ್ರೆಸ್ನ ಬಳಿಕ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು, ಈಗ ಆ ಭರವಸೆ ಈಡೇರಿದ್ದು, ಈಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಲಪಾಡ್ ಅಧಿಕಾರ ಸ್ವೀಕಾರಿಸಿದ್ದಾರೆ.