ಸುದ್ದಿ

ಡಿಜಿಪಿ ರವೀಂದ್ರನಾಥ್ ರಾಜೀನಾಮೆ?

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್‌ಇ) ಹೆಚ್ಚುವರಿ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುವಾಗ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ ಪ್ರಕರಣ ವಿಚಾರಣೆ ನಡೆಸುತ್ತಿದ್ದೆ. ಆ ವೇಳೆ ಪತ್ರಿಕಾಗೋಷ್ಟಿಯೊಂದರಲ್ಲಿ ಇಬ್ಬರ ಪ್ರಭಾವಿಗಳ ಹೆಸರು ಬಹಿರಂಗಪಡಿಸಿದ್ದಲ್ಲದೆ ಅವರು ಡಿಸಿಆರ್‌ಇ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದೆ. ಅಂದಿನಿಂದ ಸರ್ಕಾರದ ಮೇಲೆ ಪ್ರಭಾವ ಬೀರುವ ವ್ಯಕ್ತಿಗಳು ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಡಾ.ಪಿ ರವೀಂದ್ರನಾಥ್‌ ಆರೋಪಿಸಿದ್ದಾರೆ.

ನಿಜವಾದ ಎಸ್‌ಎಸ್/ಎಸ್‌ಟಿ ಸಮುದಾಯದಕ್ಕೆ ನ್ಯಾಯ ದೊರಕಿಸಿಕೊಡಲು ನಾನು ಮತ್ತಷ್ಟು ಕಾಲ ಡಿಸಿಆರ್‌ಇ ನಲ್ಲಿ ಇರಬೇಕಿತ್ತು. ನಾನು ಸರ್ಕಾರದ ವಿರುದ್ಧವಿರಲಿಲ್ಲ. ನನ್ನನ್ನು ವರ್ಗಾವಣೆ ಮಾಡಿ ಎಂದು ಕೇಳಿಕೊಂಡಿರಲಿಲ್ಲ. ಈ ವರ್ಗಾವನೆ ಸಾರ್ವಜನಿಕ ಹಿತದೃಷ್ಟಿಯಿಂದ ನಡೆದುದ್ದಲ್ಲ. ಬದಲಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ಪಿತೂರಿ ನಡೆಸಿ ನನ್ನ ವರ್ಗಾವಣೆ ಮಾಡಲಾಗಿದೆ.

ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) 1995 ರ ನಿಯಮಗಳ ಪ್ರಕಾರ ಸಂರಕ್ಷಣಾ ಕೋಶವನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸುವಂತೆ ನಾನು ಕರ್ನಾಟಕ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಮನವಿ ಮಾಡಿದ್ದೆ. ಆಗ ಅವರು ನನ್ನನ್ನು ನಡೆಸಿಕೊಂಡ ರೀತಿಯಿಂದ ಬಹಳ ನೋವಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button