ರಾಜಕೀಯ

ಶಿಗ್ಗಾವಿಯಲ್ಲಿ ಬಿಜೆಪಿ ಪರವಾದ ಅಲೆ ಕಾಣಿಸುತ್ತಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಅಭ್ಯರ್ಥಿ ಶಿಗ್ಗಾವಿ ಸವಣೂರು ಕ್ಷೇತ್ರದ ಜನರಿಗೆ ಅಪಮಾನ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿಗ್ಗಾವಿ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಅಲೆ ಕಾಣಿಸುತ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಪ್ರಚಾರ ಮಾಡುತ್ತಿದ್ದಾರೆ. ಭರತ್ ಪರವಾಗಿ ಯುವಕರು ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಾಲ್ಕೈದು ದಿನದಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಮುಕ್ತಾಯವಾಗಿಲಿದ್ದು, ದೀಪಾವಳಿ ನಂತರ ರಾಜ್ಯ ನಾಯಕರು ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದರು.


ಬಸವರಾಜ ಬೊಮ್ಮಾಯಿಯವರು ಜನರಿಗೆ ಹಣ ಹೆಂಡ ಹಂಚಿ ಚುನಾವಣೆ ಗೆಲ್ಲುತ್ತಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿಯ ಆರೋಪಕ್ಕೆ ಪ್ರತಿಕ್ರಿಯಿಸಿ ಅವರು ಸೋಲನ್ನು ಒಪ್ಪಿಕೊಳ್ಳುತ್ತಿದ್ದಾರೆ. ಶಿಗ್ಗಾವಿ ಸವಣೂರು ಜನರು ಸ್ವಾಭಿಮಾನಿಗಳು ಪ್ರಜ್ಞಾವಂತರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅವರಿಗೆ ಅವಮಾನ ಮಾಡುತ್ತಿದ್ದಾರೆ‌. ಕಾಂಗ್ರೆಸ್ ಪಕ್ಷದವರು ದೊಡ್ಡ ಪ್ರಮಾಣದಲ್ಲಿ ಹಣ ಹೆಂಡ ಖರ್ಚು ಮಾಡುವವರಿದ್ದಾರೆ. ಹಣ ಹೆಂಡ ಹೇಗೆ ಬರುತ್ತಿದೆ. ಎಲ್ಲಿ ಬರುತ್ತಿದೆ ಎಂದು ಎಲ್ಲವೂ ಗೊತ್ತಿದೆ‌. ಮಂತ್ರಿಗಳು, ಶಾಸಕರು ಚುನಾವಣೆಗೆ ಬರಿಕೈಯಲ್ಲಿ ಸುಮ್ಮನೇ ಬರುತ್ತಾರಾ ಎಂದು ಪ್ರಶ್ನಿಸಿದರು.

Related Articles

Leave a Reply

Your email address will not be published. Required fields are marked *

Back to top button