ಇತ್ತೀಚಿನ ಸುದ್ದಿ

ಅದ್ದೂರಿಯಾಗಿ ಜರುಗಿದ ಮಲ್ಲಿಕಾರ್ಜುನ ದೇವರ ಜಾತ್ರೆ ಮಹೋತ್ಸವ.

ಮಸ್ಕಿ : ಎರಡನೇ ಶ್ರೀಶೈಲ ಎಂದುಪ್ರಸಿದ್ದಿ ಪಡೆದ ಕಲ್ಯಾಣ ಕರ್ನಾಟಕದ ಮಲ್ಲಿಕಾರ್ಜುನ ದೇವರ ಮಹಾರಥೋತ್ಸವ ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ಮಲ್ಲಯ್ಯನ ರಥವನ್ನು ಎಳೆದು ಭಕ್ತರು ಭಕ್ತಿ ಸಮರ್ಪಿಸಿದರು. ಬಳಿಕ ಸಂಜೆ 5.30 ಗಂಟೆಗೆ ಪಲ್ಲಕ್ಕಿಯಲ್ಲಿ ಮಲ್ಲಿಕರ್ಜುನನ ಉತ್ಸವ ಮೂರ್ತಿಯನ್ನು ನೂತನ ರಥದ ಸುತ್ತ ಐದು ಭಾರಿ ಪ್ರದಕ್ಷಣೆ ಹಾಕಿದ ನಂತರ ರಥದ ಮೇಲೆ ಪ್ರತಿಷ್ಠಾಪಿಸಲಾಯಿತು.

ಮಸ್ಕಿಯ ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯರು, ರಥಕ್ಕೆ ಧಾರ್ಮಿಕ ವಿಧಿ-ವಿಧಾನಗಳಂತೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಭಕ್ತರು ಉತ್ತುತ್ತಿ ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರುಬಸವೇಶ್ವರ ದೇವಸ್ಥಾನ ರವರಗೆ ರಥವನ್ನು ಎಳೆದು ಪುನಃ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ತರಲಾಯಿತು.ಭೋವಿ (ವಡ್ಡರ್) ಸಮಾಜದ ಅನೇಕ ಯುವಕರು ದಿನ ಉಪವಾಸ ಹಾಗೂ ಮಡಿವಂತಿಕೆಯಿಂದ ತೆರಿನ ರಥಕ್ಕೆ ಸೊನ್ನೆ ಹಾಕುವ ಮೂಲಕ ರಥೋತ್ಸವದ ಯಶಸ್ವಿಗೆ ಕಾರಣರಾದರು.ಈ ವೇಳೆ,ಶಾಸಕ ಬಸವನಗೌಡ ತುರುವಿಹಾಳ,ಮಹಾದೇವಪ್ಪಗೌಡ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ,ಕೆ.ವೀರನಗೌಡ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಮಲ್ಲಿಕಾರ್ಜುನ ದೇವರ ಅರ್ಚಕರಾದ ಸಿದ್ದಯ್ಯ ಹೆಸರೂರು,ಮಲ್ಲಿಕಾರ್ಜುನ ದೇವಸ್ಥಾನದ ಮಹಿಳಾ ಅರ್ಚಕರಾದ ಶ್ರೀ ಮತಿ ಅಂಬಿಕಾ ಸಿದ್ದಯ್ಯ ಹೆಸರೂರು ಹಿರೇಮಠ,ಪಂಪಯ್ಯ ಸ್ವಾಮಿ ಹೆಸರೂರು ಹಿರೇಮಠ, ಸೇರಿದಂತೆ ಊರಿನ ಪ್ರಮುಖ ಮುಖಂಡರು,ಪುರಸಭೆ ಸದಸ್ಯರು,ಅಧಿಕಾರಿಗಳುಪಾಲ್ಗೊಂಡಿದ್ದರು,ಪಿಎಸ್ ಐ ಮುದ್ದು ರಂಗಯ್ಯ ರವರ ನೇತೃತ್ವದಲ್ಲಿ ಪೊಲೀಸ್ ಬಿಗಿ ಬದೋಬಸ್ತ್ ಮಾಡಲಾಗಿತ್ತು.

ವರದಿ ; ಸಿದ್ದಯ್ಯ ಸ್ವಾಮಿ ಹೆಸರೂರು tv8kannada ಮಸ್ಕಿ

Related Articles

Leave a Reply

Your email address will not be published. Required fields are marked *

Back to top button