ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ: ಸಿ.ಎಂ ಘೋಷಣೆ*
ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ
ಮಲೈ ಮಹದೇಶ್ವರ ಏ.24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು.
*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.
*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
*ಹಿಂದಿನ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು, ಶಾಸಕರು, ಅಧಿಕಾರಿಗಳು ಇದ್ದರು.
ವರದಿ : ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ