ತನಗಿಂತ 2 ವರ್ಷ ದೊಡ್ಡವಳೊಂದಿಗೆ ಲವ್: ವಾರ್ನ್ ಮಾಡಿದ್ರೂ ಯುವತಿ ಹಿಂದೆ ಬಿದ್ದ ಯುವಕ ಹತ್ಯೆ

ಯುವಕನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದುಷ್ಕರ್ಮಿಗಳು ಹತ್ಯೆ(kill) ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಗ್ರಾಮದಲ್ಲಿ ನಡೆದಿದೆ. ನೀರುಗುಂಟೆಪಾಳ್ಯ ಗ್ರಾಮದ ಪ್ರೀತಂ (19) ಕೊಲೆಯಾದ ಯುವಕ.
.ಪ್ರೀತಂ ತನಗಿಂದ 2 ವರ್ಷ ದೊಡ್ಡವಳಾದ ಯುವತಿಯನ್ನು ಪ್ರೀತಿಸುತ್ತಿದ್ದ, ಯುವತಿ MBBS ಓದುತ್ತಿದ್ದಳು. ಪ್ರೀತಂ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತನ ಪ್ರೀತಿಯ ವಿಷಯ ತಿಳಿದ ಯುವತಿಯ ಸಂಬಂಧಿಕರು ಎರಡು ಬಾರಿ ವಾರ್ನಿಂಗ್ ನೀಡಿದ್ದರು. ಆದರೆ ಈತ ತನ್ನ ಪ್ರೀತಿಯನ್ನು ಮುಂದುವರೆಸಿದ್ದ. ಇದರಿಂದ ಕುಪಿತಗೊಂಡ ಯುವತಿಯ ಚಿಕ್ಕಮ್ಮನ ಮಗ ಶ್ರೀಕಾಂತ್ ತನ್ನ ಸ್ನೇಹಿತರೊಂದಿಗೆ ಕಂಠ ಪೂರ್ತಿ ಕುಡಿದು, ಪ್ರೀತಂನನ್ನು ಅಪಹರಿಸಿ ಹಲ್ಲೆಗೈದು ಹತ್ಯೆ ನಡೆಸಿದ್ದಾನೆ.ಪ್ರೀತಂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ನ್ಯಾಯ ಕೊಡಿಸುವಂತೆ ಪೊಲೀಸರ ಬಳಿ ಮೊರೆಯಿಟ್ಟಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸ್ ಠಾಣೆಯ ಮುಂದೆ ಯುವಕನ ತಾಯಿ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿ ತಂದೆ ಶ್ರೀನಿವಾಸ್ ಹೇಳಿದ್ದಿಷ್ಟು
ಯುವಕನ ಕೊಲೆ ಸಂಬಂಧ ಯುವತಿ ತಂದೆ ಶ್ರೀನಿವಾಸ್ ಪ್ರತಿಕ್ರಿಯಿಸಿದ್ದು, ನನ್ನ ಮಗಳು ಪಲ್ಲವಿ ಚಿತ್ರದುರ್ಗದಲ್ಲಿ ಎಂಬಿಬಿಎಸ್ ಓದುತ್ತಿದ್ದಾಳೆ. ಈ ಹುಡುಗ ಪತ್ರ ಬರೆದುಕೊಂಡು ನನ್ನ ಮಗಳಿಗೆ ಲವ್ ಮಾಡುತ್ತಿದ್ದು, ಇಲ್ಲಾಂದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದನಂತೆ. ಮಗಳು ಇತ್ತೀಚೆಗೆ ನನ್ನ ಬಳಿ ಹೆಚ್ಚಿನ ಹಣ ಕೇಳುತ್ತಿದ್ದಳು. ಏಕೆ ಎಂದು ಕೇಳಿದ್ದೇ. ಮನೆಗೆ ಬಂದಾಗ ಅವಳ ಫೋನ್ ಚೆಕ್ ಮಾಡಿದಾಗ ಫ್ರೆಂಡ್ ಮೂಲಕ ಕೊಲೆಯಾದ ಪ್ರೀತಂಗೆ ಹಣ ಹಾಕಿಸಿದ್ದಳು. ಕೇಳಿದಕ್ಕೆ ನನ್ನ ಫೋಟೋ ಇಟ್ಕೊಂಡು ಬೆದರಿಸುತ್ತಿದ್ದ, ಅದಕ್ಕೆ ಹಣ ಹಾಕಿದ್ದೆ ಅಂತ ಹೇಳಿದ್ದಳು. ಹೀಗಾಗಿ ನನ್ನ ಮಗಳಿಗೆ ನಾನು ಬೈದು ಬುದ್ದಿವಾದ ಹೇಳಿದ್ದೆ. ಬಳಿಕ ಸಿಮ್ ಚೇಂಜ್ ಮಾಡಿ ಫೋನ್ ಪೇ ಎಲ್ಲಾ ಡಿಲೀಟ್ ಮಾಡಿಸಿದ್ದೆ. ಆದರೂ ಅವನು ಅವಳನ್ನ ಹುಡುಕಿಕೊಂಡು ಚಿತ್ರದುರ್ಗಕ್ಕೆ ಹೋಗಿ ಕಿರುಕುಳ ನೀಡಿದ್ದ ಎಂದಿದ್ದಾರೆ.
ನಮ್ಮ ಪತ್ನಿಯ ಅಕ್ಕನ ಮಗ ಈ ರೀತಿ ಮಾಡಿದ್ದಾನೆ: ಶ್ರೀನಿವಾಸ್
ನಮ್ಮ ಪತ್ನಿಯ ಅಕ್ಕನ ಮಗ ವಿಚಾರ ತಿಳಿದುಕೊಂಡು ಬಂದು ಈ ರೀತಿ ಮಾಡಿದ್ದಾನೆ. ನಮ್ಮ ಮನೆಯಲ್ಲಿ ಸಂಬಂಧಿಕರ ಮದುವೆ ಇತ್ತು. ಮದುವೆಗೆ ಅಂತ ಕಾರು ರೆಡಿ ಮಾಡಿಕೊಂಡು ಬಂದವನು ಈ ರೀತಿ ಮಾಡಿದ್ದಾನೆ. ನಮಗೆ ಪೊಲೀಸರು ಮನೆ ಬಳಿಗೆ ಬಂದ ಮೇಲೆ ಕೊಲೆಯಾಗಿದೆ ಅನ್ನೂ ವಿಚಾರ ಗೊತ್ತಾಗಿದೆ. ಈ ಕೊಲೆ ಕೇಸ್ನಲ್ಲಿ ನಮ್ಮದು, ನಮ್ಮ ಮಗಳದ್ದು ಯಾವುದೇ ಪಾತ್ರವಿಲ್ಲ. ನಾನು ಆ ಹುಡುಗನಿಗೆ ಯಾವುದೇ ವಾರ್ನಿಂಗ್ ನೀಡಿಲ್ಲ. ಅವನ ಮುಖ ಸಹ ನಾನು ನೋಡಿಲ್ಲ. ನಮಗೆ ಮಾಹಿತಿನೇ ಇಲ್ಲದೆ ಬಂದು ಈ ರೀತಿ ಮಾಡಿದ್ದಾನೆ. ನನ್ನ ಪತ್ನಿ ಸಹ ಈ ರೀತಿ ಮಾಡು ಅಂತ ಹೇಳಿಲ್ಲ. ಸಾಲ ಮಾಡಿ ನನ್ನ ಮಗಳನ್ನ ಓದಿಸುತ್ತಿದ್ದೀನಿ, ಕೊಲೆ ಬಗ್ಗೆ ನಮಗೆ ಮಾಹಿತಿ ಇಲ್ಲ. ನಾವೆಲ್ಲ ಮದುವೆಯಲ್ಲಿ ಬ್ಯುಸಿಯಾಗಿದ್ದೇವು ಎಂದು ಹೇಳಿದ್ದಾರೆ.
ವರದಿ : B ಆಶ್ರಿತ್ ಕ್ರೈಂ ರಿಪೋಟ್ tv8kannada ಬೆಂಗಳೂರು