ವಿರಾಟ್ ಕೊಹ್ಲಿಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಸಿಎಂ..!

ಬೆಂಗಳೂರು: ಸತತ 18 ವರ್ಷದ ಕನಸನ್ನು ಹೊಂದಿದ ಆರ್ಸಿಬಿ ಯು ನಿನ್ನೆ (ಮಂಗಳವಾರ ಜೂನ್ 03) ರಂದು ನಡೆದ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟ್ರೋಫಿ ಗೆದ್ದು ಬಿಗಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕರ್ನಾಟಕ ಸರ್ಕಾರ ಇಂದು (ಬುಧವಾರ ಜೂನ್ 04) ಸನ್ಮಾನಿಸುತ್ತಿದ್ದು ಆರ್ಸಿಬಿ ತಂಡದ ನಾಯಕರು ಬೆಂಗಳೂರಿಗೆ ಆಗಮಿಸಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡದ ಧ್ವಜ ನೀಡಿ ಆರ್ಸಿಬಿ ತಂಡದ ನಾಯಕರನ್ನು ಸ್ವಾಗತಿಸಿದ್ದಾರೆ.
ಅದಲ್ಲದೆ ಕಿಂಗ್ ಕೊಹ್ಲಿಗೆ ಕನ್ನಡ ಧ್ವಜ ನೀಡಿ ಬೆಂಗಳೂರಿಗೆ ಡಿಸಿಎಂ ಸ್ವಾಗತಮಾಡಿದರು. ಆರ್ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಹೋಗಲಾಯಿತು.
ಇನ್ನು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದ್ದು, ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.