ಇತ್ತೀಚಿನ ಸುದ್ದಿ

ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್

ಬಳ್ಳಾರಿ: ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣವು ಇಡೀ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನೆ ಸೃಷ್ಟಿಯಾಗಿತ್ತು.


ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಹಲವು ತಿಂಗಳು ಜೈಲು ಸೆರೆವಾಸ ಅನುಭವಿಸಿ ಜಾಮೀನು ಮೇಲೆ ಹೊರ ಬಂದಿದ್ದಾರೆ.


ಇನ್ನು ಬೆಂಗಳೂರಲ್ಲಿ ಇಂದು (ಬುಧವಾರ ಜೂನ್‌ 11) ರಂದು ಬೆಳ್ಳಂ ಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಇಡಿ ಶಾಕ್ ನೀಡಿದೆ. ಶಾಸಕರ ಭವನದ ನಾಗೇಂದ್ರ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ವಾಲ್ಮೀಕಿ ಬಹುಕೋಟಿ ಹಗರಣ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಂಡೂರಿ ನಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣವನ್ನು ಬಳಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ..
ಜೊತೆಗೆ ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್, ಕೂಡ್ಲಿಗಿ ಶಾಸಕ ಶ್ರೀನಿವಾಸ್ ಮನೆ ಮೇಲೂ ಇ.ಡಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲಿಸುತ್ತಿದೆ.

Related Articles

Leave a Reply

Your email address will not be published. Required fields are marked *

Back to top button