ಇತ್ತೀಚಿನ ಸುದ್ದಿ

ಅಧುನಿಕತೆಯ ಭರಾಟೆಯಲ್ಲಿ ಪರಿಸರ ನಾಶವಾಗುತ್ತಿದೆವನಸಿರಿ ಅಮರೇಗೌಡ ಮಲ್ಲಾಪುರ ಕಳವಳ

ಮಸ್ಕಿ : ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯಾದ ಎಸ್.ಡಿ.ಎಂ.ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ವನಸಿರಿ ಪೌಂಡೇಷನ್ ಪೌಂಡೇಷನ್(ರಿ)ರಾಜ್ಯ ಘಟಕ ರಾಯಚೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ
ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.

ಈ ವೇಳೆ, ವನಸಿರಿ ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ರವರು ಮಾತನಾಡಿ,

ಮರ ದೇವನಿತ್ತ ವರ ಮರದ ರಕ್ಷಣೆ ಮಹಾದೇವನ ರಕ್ಷಣೆ ಮಾಡಿದಂತೆ ಎನ್ನುವ ಕೊಪ್ಪಳದ ಗವಿ ಶ್ರೀಗಳ ಒಂದು ಅಮೃತ ವಾಣಿಯಂತೆ ಗಿಡ ಮರಗಳನ್ನು ಉಳಿಸಿ ಬೆಳಸುವ ಮೂಲಕ ಹಸಿರುಕರಣ ಮಾಡಿ ಮಹಾದೇವನ ಕೃಪೆಗೆ ಪಾತ್ರರಾಗೋಣ. ನಾವುಗಳೆಲ್ಲರೂ ಪ್ರತಿಯೊಂದು ಹುಟ್ಟುಹಬ್ಬದ,ಮದುವೆ ಇನ್ನಿತರ ಸಮಾರಂಭಗಳಲ್ಲಿ ಸಸಿಗಳನ್ನು ನೆಟ್ಟು ಆಚರಿಸಬೇಕು.ಅದೇರೀತಿ ರಕ್ಷಾ ಬಂಧನ ಬಂದಾಗ ಗಿಡಗಳಿಗೆ ರಾಖಿ ಕಟ್ಟಿ ಗಿಡಮರಗಳನ್ನು ಬೆಳೆಸಲು ಮುಂದಾಗಬೇಕು.ಇಲ್ಲದ್ದಿದ್ದರೆ ಆಧುನಿಕತೆಯ ಭರಾಟೆಯಲ್ಲಿ ಪರಿಸರ ವಿನಾಶದತ್ತ ಸಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಇದೇವೇಳೆ
ಶಾಲಾ ಮಕ್ಕಳಿಂದ ಪರಿಸರ ಜಾಗೃತಿ ಕಿರು ನಾಟಕ ಪ್ರದರ್ಶಿಸಲಾಯಿತು

ನಂತರ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮಗುವಿ ಗೊಂದರಂತೆ 500 ಸಸಿಗಳನ್ನು ವಿತರಣೆ ಮಾಡಲಾಯಿತು.

ಈ ವೇಳೆ, ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ನ್ಯಾಯನೆಗಲಿ
,ಚಂದ್ರಶೇಖರ, ಉಮಾಕಾಂತ ಹಳ್ಳಿ, ಅಮರೇಶ ಪತ್ತಾರ ಬಳಗಾನೂರ,ಶ್ರೀಧರ, ರಾಜು ಪತ್ತಾರ,ಚನ್ನಪ್ಪ ಕೆ
ಹೊಸಹಳ್ಳಿ,ಮುದುಕಪ್ಪ ಹೊಸಳ್ಳಿ ಕ್ಯಾಂಪ್ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button