ಸುದ್ದಿ
ಪದ್ಮರಾಜ ದಂಡಾವತಿ, ಹರೀಶ್ ಹಾಗಲವಾಡಿಗೆ ಬಿ.ಎಂ.ಶ್ರೀ. ಪ್ರತಿಷ್ಠಾನ ಪ್ರಶಸ್ತಿ
ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ಕೊಡಮಾಡುವ ‘ಶಾ. ಬಾಲೂರಾವ್ ಅನುವಾದ ಪ್ರಶಸ್ತಿ’ಗೆ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ಕೃತಿ ‘ಸೀತಾ’ ಹಾಗೂ ‘ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿ’ಗೆ ಹರೀಶ್ ಹಾಗಲವಾಡಿ ಅವರ ‘ಋಷ್ಯಶೃಂಗ’ ಕೃತಿ ಆಯ್ಕೆಯಾಗಿದೆ.
2020ರಲ್ಲಿ ಮೊದಲ ಮುದ್ರಣಗೊಂಡ ಕೃತಿಗಳನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಅನುವಾದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಪ್ರೊ.ಎಂ.ಎಸ್. ರಘುನಾಥ್ ಹಾಗೂ ಪ್ರೊ. ನಗರಗೆರೆ ರಮೇಶ್ ಇದ್ದರು. ಯುವ ಬರಹಗಾರರ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಆನಂದರಾಮ ಉಪಾಧ್ಯ ಮತ್ತು ಡಾ.ಜಿ.ವಿ.ಆನಂದಮೂರ್ತಿ ಇದ್ದರು. ಈ ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು, ಫಲಕವನ್ನು ಒಳಗೊಂಡಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.