ವಿಶ್ವ ವಿಖ್ಯಾತ ಮೈಸೂರು ದಸರಾಗೆ(Mysuru Dasara) ವಿದ್ಯುಕ್ತ ಚಾಲನೆ ನೀಡಲಾಗಿದ್ದು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ(S.M Krishna) ಈ ಬಾರಿ ದಸರಾಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್ , ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ, ಸುನೀಲ್ ಕುಮಾರ್, ಶಿವರಾಂ ಹೆಬ್ಬಾರ್ ಸೇರಿದಂತೆ ಮೈಸೂರು ಭಾಗದ ಶಾಸಕರು, ಸಂಸದರು ಭಾಗಿಯಾಗಿದ್ದರು.
ಇಂದಿನಿಂದ 15ವರೆಗೆ ದಸರಾ ನಡೆಯಲಿದ್ದು,ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಹ ಕಳೆದ ಬಾರಿಯಂತೆ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಮನೆ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಇನ್ನು ಕಳೆದ ಬಾರಿಯಂತೆಯೆ ಈ ಬಾರಿ ಸಹ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿಗಳನ್ನು(Dasara Guidelines) ಬಿಡುಗಡೆ ಮಾಡಲಾಗಿದೆ. ಇನ್ನು ಈ ಬಾರಿ ಕೂಡ ಜಂಬೂ ಸವಾರಿ ಕೇವಲ ಅರಮನೆಗೆ ಮಾತ್ರ ಸೀಮಿತವಾಗಿದೆ.
ಮನುಕುಲಕ್ಕೆ ಬಂದ ದೊಡ್ಡ ಗಂಡಾಂತರ ಕೊರೊನಾ, ಈ ಗಂಡಾಂತರದಿಂದ ಪಾರು ಮಾಡಿ ಎಂದು ಚಾಮುಂಡಿದೇವಿಗೆ ಪೂಜೆ ಸಲ್ಲಿಸಿದ್ದೇವೆ ಎಂದು 411ನೇ ಮೈಸೂರು ದಸರಾ ಉದ್ಘಾಟನೆ ಮಾಡಿದ ಬಳಿಕ ಎಸ್.ಎಂ. ಕೃಷ್ಣ ಹೇಳಿಕೆ. ದೊಡ್ಡ ಗೌರವ ನೀಡಿದ್ದೀರಿ ಎಂದು ಸಿಎಂ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ ಅವರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.