Karnataka Rains Today ಬೆಂಗಳೂರು(ಅ.20): ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಸಹ ಮುಂದುವರಿಯಲಿದೆ. ಅರಬ್ಬಿ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರವಾಳಿ ಭಾಗದಲ್ಲಿ ಮಳೆ(Rainfall)ಯಾಗುವ ಸಾಧ್ಯತೆಗಳಿವೆ.
ಕರಾವಳಿಜಿಲ್ಲೆಗಳಲ್ಲಿಅಕ್ಟೋಬರ್ 22ರವರೆಗೂಮಳೆಯಾಗಲಿದೆಎಂದುಭಾರತೀಯಹವಾಮಾನಇಲಾಖೆ(IMD) ಮುನ್ಸೂಚನೆನೀಡಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರುಗ್ರಾಮಾಂತರ, ಬೆಂಗಳೂರುನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಮಳೆಮುಂದುವರೆಯಲಿದೆಎಂದುಇಲಾಖೆಮಾಹಿತಿನೀಡಿದೆ.
ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇವತ್ತು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.